ದಾವಣಗೆರೆ – ಇತ್ತೀಚೆಗೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಹೂವಿನಹಡಗಲಿ ಮೂಲದ ಕೆಲಸದ ಮಹಿಳೆಯನ್ನು ಮೀನು ಕದ್ದಿದ್ದಾರೆ ಎನ್ನುವ ನೆಪವೊಡ್ಡಿ ಮರಕ್ಕೆ ಕಟ್ಟಿ ಥಳಿಸಿರುವುದನ್ನು ಖಂಡಿಸಿ NFIW ಮಹಿಳಾ ಒಕ್ಕೂಟದ ವತಿಯಿಂದ ರಾಜ್ಯದ ಗೃಹ ಮಂತ್ರಿಗಳಿಗೆ ದಾವಣಗೆರೆ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದವರನ್ನು ಶಿಕ್ಷೆಗೊಳಪಡಿಸುವಂತೆ ಒತ್ತಾಯಿಸಲಾಯಿತು.
ಮತ್ತು ಈ ತರಹದ ಘಟನೆಗಳು ರಾಜ್ಯದಲ್ಲಿ ಮುಂದೆ ನಡೆಯದಂತೆ ಕ್ರಮವಹಿಸಬೇಕೆಂದು ಮನವಿ ಮಾಡಲಾಯಿತು.
ಮನವಿ ಸಲ್ಲಿಸುವ ಸಂದರ್ಭ ದಲ್ಲಿ NFIW ಮಹಿಳಾ ಒಕ್ಕೂಟದ ರಾಜ್ಯ ಸಮಿತಿ ಸದಸ್ಯೆ ಸರೋಜಾ ಮುಖಂಡರುಗಳಾದ ಗೀತಾ, ಅನ್ನಪೂರ್ಣ, ಶಕುಂತಲಮ್ಮ ಇದ್ದರು.
Home ಸಾರ್ವಜನಿಕ ಧ್ವನಿ ಮೀನು ಕದ್ದಿದ್ದಾರೆ ಎನ್ನುವ ನೆಪವೊಡ್ಡಿ ಮಹಿಳೆಯನ್ನ ಮರಕ್ಕೆ ಕಟ್ಟಿ ಥಳಿಸಿರುವುದನ್ನು ಖಂಡಿಸಿ NFIW ಪ್ರತಿಭಟಿನೆ