ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿ ತೀರ ಆಘಾತಕಾರಿ. ಅತ್ಯಂತ ಪ್ರವಾಸಿಗರ‌ ಆಕರ್ಷಕ ಸ್ಥಳದಲ್ಲಿ ಇಂದು ಮಧ್ಯಾಹ್ನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ವೇಳೆ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಜುನಾಥ ರಾವ್ ಮೃತ ಪಟ್ಟಿರೋದು ದುರದೃಷ್ಟಕರ.

ಉಗ್ರರ ದಾಳಿಯ ಕುರಿತು ಈಗಾಗಲೇ ಪ್ರಧಾನ ಮಂತ್ರಿ ಶ್ರೀ ನರೇಂದ್ರ ‌ಮೋದಿಯವರು ಕೇಂದ್ರ ಗೃಹ ಸಚಿವರಿಂದ ಮಾಹಿತಿ ಪಡೆದಿದ್ದು, ಪ್ರವಾಸಿ ತಾಣದಲ್ಲಿ ಸಿಲುಕಿರುವವರ ರಕ್ಷಣೆ ಹಾಗೂ ಪರಿಸ್ಥಿತಿ ಹತೋಟಿಗೆ ತರಲು ಸೂಚನೆ ನೀಡಿದ್ದಾರೆ.

ಈಗಾಗಲೇ ಕೇಂದ್ರ ಗೃಹ ಮಂತ್ರಿ ಶ್ರೀ ಅಮಿತ್ ಶಾ ರವರು ಶ್ರೀನಗರಗೆ ತೆರಳಿದ್ದಾರೆ.

ಶಾಂತಿ ಕೆಡವಲು ಹಾಗೂ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರ ಆಕರ್ಷಣೀಯ ತಾಣದಲ್ಲಿ‌ ಆತಂಕ ನಿರ್ಮಾಣ ಮಾಡಲು ಉಗ್ರರು ದಾಳಿ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ.

ಈ‌ ದುರಂತದಲ್ಲಿ ಮೃತಪಟ್ಟವರ‌ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ನಾನು ಪ್ರಾರ್ಥಿಸುತ್ತೇನೆ.

LEAVE A REPLY

Please enter your comment!
Please enter your name here