ಬೆಂಗಳೂರು ನಗರ ಜಿಲ್ಲೆ, ಏಪ್ರಿಲ್ 22 :ಬೆಂಗಳೂರು ನಗರ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಕಾಧಿಕಾರಿಗಳು, ತಹಸೀಲ್ದಾರರು, ಬಾಲ, ವಿವಾಹ ನಿಷೇಧಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಸೂಚಿಸಿದ್ದಾರೆ.
ಏಪ್ರಿಲ್ 30 ರಂದು ಅಕ್ಷಯ ತೃತೀಯ ದಿನವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ, ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಅತೀ ಹೆಚ್ಚಾಗಿ ಆಯೋಜನೆ ಆಗುವ ಸಂಭವವಿರುತ್ತದೆ. ಅಂತಹ ಸಂದರ್ಭಗಳಲ್ಲಿ ಅಪ್ರಾಪ್ತರಾಗಿರುವ ವಯಸ್ಸಿನ ಮಕ್ಕಳ ವಿವಾಹಗಳು ಜರುಗುವ ಸಾಧ್ಯತೆಗಳು ಅಧಿಕವಾಗಿರುವುದನ್ನು ಗಮನಿಸಿ ಇರುವುದನ್ನು ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದಪಡಿ ಕಾಯ್ದೆ-2016 ರ ಕಲಂ 13(4)ರಲ್ಲಿ For the purpouse of preventing solemnisation of mass child marriages on certain days such as “Akshaya Truthiya” The District Magistrate sale be deemed to be the child marriage prohibition officer with all powers as are conferred on a child marriage prohibition officer by or under this Act 13(5) O” The District Magistrate shall also have additional powers to stop or prevent solemnization of child marriages and for this purpose, he may take all appropriate measures and use the minimum force required”: ವಿವಾಹಗಳನ್ನು ತಡೆಗಟ್ಟಲು ಅಧಿಕಾರವನ್ನು ನೀಡಿದೆ.
ಮದುವೆಯ ಹೆಸರಿನಲ್ಲಿ ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಅರಿವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುಲಾಗುತ್ತಿದ್ದರೂ ಇನ್ನೂ ಸಹ ಇಲಾಖೆಗಳ ಗಮನಕ್ಕೆ ಬಾರದೆ / ಗೊತ್ತಿಲ್ಲದೆಯೇ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಏಪ್ರಿಲ್ 30 ರಂದು ಅಕ್ಷಯ ತೃತೀಯ ದಿನ ಇದ್ದು, ಈ ದಿನದಂದು ಹಾಗೂ ಇತರೆ ದಿನಗಳಂದು ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚು ಆಯೋಜನೆಯಾಗಬಹುದಾಗಿದೆ. ಈ ಸಂದರ್ಭಗಳಲ್ಲಿ ಬಾಲ್ಯವಿವಾಹಗಳು ನಡೆಯಬಹುದಾದ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟ ತಾಲ್ಲೂಕು ಮಟ್ಟ, ವಾರ್ಡ್ ಮಟ್ಟ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಯಾವುದೇ ಬಾಲ್ಯ ವಿವಾಹಗಳು ಜರುಗದಂತೆ ನಿಗಾವಹಿಸಿ ನಿಯಮಾನುಸಾರ ಕಾರ್ಯ ಪ್ರವೃತ್ತರಾಗಿ, ಸಾಮೂಹಿಕ ವಿವಾಹ ಆಯೋಜಕರಿಗೆ ಹಾಗೂ ಸಾರ್ವಜನಿಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಅರಿವು ಮೂಡಿಸುವುದು ಅಲ್ಲದೇ ಬೆಂಗಳೂರು ನಗರ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸೋಣ ಮತ್ತು ಸಾರ್ವಜನಿಕರಿಗೆ ಬಾಲ್ಕ ವಿವಾಹ ನಡೆಯುವ ಮಾಹಿತಿ ಕಂಡು ಬಂದಲ್ಲಿ 1098/ 112 ಕ್ಕೆ ಕರೆ ಮಾಡಿ ಮಾಹಿತಿಯನ್ನು ನೀಡುವುದರ ಮೂಲಕ ಬಾಲ್ಯವಿವಾಹಗಳನ್ನು ತಡೆಗಟ್ಟಲು ಸಹಕಾರ ನೀಡುವುದು.
ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ಕೇಂದ್ರ, ದೂರವಾಣಿ ಸಂಖ್ಯೆ:080-29523458, ಬೆಂಗಳೂರು ದಕ್ಷಿಣ (ಕೆಂಗೇರಿ), ದೂರವಾಣಿ ಸಂಖ್ಯೆ 080-23442233, ಬೆಂಗಳೂರು ಪಶ್ಚಿಮ (ಆನೇಕಲ್) ದೂರವಾಣಿ ಸಂಖ್ಯೆ: 080-22076833 ಬೆಂಗಳೂರು ಪೂರ್ವ (ಕೆ.ಆರ್.ಪುರಂ) ದೂರವಾಣಿ ಸಂಖ್ಯೆ: 080-29904132 ಹಾಗೂ ಬೆಂಗಳೂರು ಉತ್ತರ (ಯಲಹಂಕ) ದೂರವಾಣಿ ಸಂಖ್ಯೆ: 080-28461452 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಜಿ. ಜಗದೀಶ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.